Homeಕರ್ನಾಟಕಕಾಲ್ತುಳಿತ | ಕೆ. ಗೋವಿಂದರಾಜು ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ತೆರವು

ಕಾಲ್ತುಳಿತ | ಕೆ. ಗೋವಿಂದರಾಜು ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ತೆರವು

ಆರ್‌ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತದ ಸುತ್ತ ನಡೆಯುತ್ತಿರುವ ರಾಜಕೀಯ ತಲ್ಲಣಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ. ಗೋವಿಂದರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದೆ.

ಅವರ ಮೇಲೆ ಕೇಳಿಬಂದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಅವರನ್ನು ಸ್ಥಾನದಿಂದ ತೆಗೆದುಹಾಕಲಾಗಿದೆ. ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ. ಗೋವಿಂದರಾಜು ಅವರ ಹೆಸರನ್ನು ಪ್ರಸ್ತಾಪಿಸಿ ಗಂಭೀರ ಆರೋಪಗಳನ್ನು ಮಾಡಿದ್ದರು. “ಸಿಎಂ ಜೊತೆಯಲ್ಲಿ 24 ಗಂಟೆ ಭದ್ರತಾ ಸಿಬ್ಬಂದಿ ಇರುತ್ತಾರೆ. ಅದರ ಜೊತೆಗೆ 24 ಗಂಟೆ ‘ಗೋವಿಂದಾ ಗೋವಿಂದಾ’ ಎನ್ನುವ ವ್ಯಕ್ತಿ ಇರುತ್ತಾರೆ” ಎಂದು ಹೇಳುವ ಮೂಲಕ, ಗೋವಿಂದರಾಜು ಅವರ ಪ್ರಭಾವ ಮತ್ತು ಸಿಎಂ ಅವರೊಂದಿಗೆ ಇರುವ ನಿಕಟ ಸಂಬಂಧವನ್ನು ಪರೋಕ್ಷವಾಗಿ ಸೂಚಿಸಿದ್ದರು.

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಗೋವಿಂದರಾಜ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments