HomeSportಕಾಲ್ತುಳಿತ ದುರಂತ | ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು

ಕಾಲ್ತುಳಿತ ದುರಂತ | ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯವಾಗಿದ್ದಾರೆ.

ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಅಸಹಜ ಸಾವು ಎಂದು ಪ್ರಕರಣ ದಾಖಲು

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಯುಡಿಆರ್ (ಅಸಹಜ ಸಾವು) ಪ್ರಕರಣಗಳು ದಾಖಲಾಗಿವೆ.

ಕಾಲ್ತುಳಿತ ಘಟನೆಯಲ್ಲಿ ಭೂಮಿಕ್ (20), ಸಹನಾ (19), ಪೂರ್ಣಚಂದ್ರ (32), ಚಿನ್ಮಯಿ (19), ದಿವ್ಯಾಂಶಿ (13), ಶ್ರವಣ್ (20), ದೇವಿ (19) ಶಿವಲಿಂಗ್ (17) ಮನೋಜ್ (33), ಅಕ್ಷತಾ ಸೇರಿ 11 ಮಂದಿ ಮೃತಪಟ್ಟಿದ್ದರು. ಪ್ರತ್ಯೇಕ ಯುಡಿಆರ್ ಪ್ರಕರಣಗಳು ದಾಖಲಾಗಿವೆ.‌

ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಹೊಣೆ ಮಾಡಿಲ್ಲ. ಅಸಹಜ ಸಾವು ಪ್ರಕರಣ ಎಂದಷ್ಟೇ ದಾಖಲು ಮಾಡಿಕೊಂಡಿದ್ದಾರೆ. ಕ್ರಮ ಕೈಗೊಳ್ಳದೇ ಕಾರ್ಯಕ್ರಮ ಆಯೋಜಿಸಿದ್ದರವನ್ನು ಹೊಣೆ ಮಾಡಿ ಎಫ್‌ಐಆ‌ರ್ ದಾಖಲಿಸಬೇಕು ಎಂದು ಮೃತರ ಕುಟುಂಬದವರು ಆಗ್ರಹಿಸಿದ್ದಾರೆ.

ಮ್ಯಾಜಿಸ್ಟ್ರೀಯಲ್ ತನಿಖೆಗೆ ಸರ್ಕಾರ ಆದೇಶ

ಆರ್​ಸಿಬಿ ತಂಡ ಐಪಿಎಲ್ ಹದಿನೆಂಟನೇ ಆವೃತ್ತಿಯಲ್ಲಿ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದೆ.

ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನಾಗಿ ಜಗದೀಶ್ ಜಿ, ಐಎಎಸ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್‌ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು. ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಯಲಿದೆ.

ವಿಚಾರಣಾಧಿಕಾರಿಯವರು ಈ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಮ್ಯಾಜಿಸ್ಪೀರೀಯಲ್‌ ವಿಚಾರಣೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಆದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments