HomeUncategorizedಶಿಕ್ಷಕ, ಪದವೀಧರ ಕ್ಷೇತ್ರ | ಇಬ್ಬರು ಅಭ್ಯರ್ಥಿಗಳ ಗೆಲುವು, ಪ್ರಗತಿಯಲ್ಲಿ ಮತ ಎಣಿಕೆ

ಶಿಕ್ಷಕ, ಪದವೀಧರ ಕ್ಷೇತ್ರ | ಇಬ್ಬರು ಅಭ್ಯರ್ಥಿಗಳ ಗೆಲುವು, ಪ್ರಗತಿಯಲ್ಲಿ ಮತ ಎಣಿಕೆ

ವಿಧಾನ ಪರಿಷತ್‌ನ ಮೂರು ಶಿಕ್ಷಕ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು (ಜೂ.6) ಬಹುತೇಕ ಪೂರ್ಣಗೊಳ್ಳುವ ಹಂತ ತಲುಪಿದ್ದು, ಇಬ್ಬರು ಅಭ್ಯರ್ಥಿಗಳು ಈಗ ಗೆಲುವು ಸಾಧಿಸಿದ್ದಾರೆ.

ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಅಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಜೂ.3ರಂದು ಚುನಾವಣೆ ನಡೆದಿದೆ.

ಶಿಕ್ಷಕರ ಕ್ಷೇತ್ರ ಫಲಿತಾಂಶ

ದಕ್ಷಿಣ ಶಿಕ್ಷಕರ ಕ್ಷೇತ್ರ: ಮೇಲ್ಮನೆ ಪ್ರವೇಶಿಸಿದ ರಿಯಲ್ ಎಸ್ಟೇಟ್ ಉದ್ಯಮಿ ಕೆ.ವಿವೇಕಾನಂದ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ರದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ.
ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್ ಎಲ್ ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ರ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ ಕೆ ಮಂಜುನಾಥ್ ಕುಮಾರ್ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್‌ನ ಶ್ರೀನಿವಾಸ್‌ 457 ಮತಗಳ ಮುನ್ನಡೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್‌ನ ಡಿ ಟಿ ಶ್ರೀನಿವಾಸ್ 2,900 ಮತಗಳನ್ನು ಪಡೆದು ಬಿಜೆಪಿಯ ವೈ ಎ ನಾರಾಯಣಸ್ವಾಮಿ ಅವರಿಗಿಂತ 457 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಾರಾಯಣಸ್ವಾಮಿ 2,443 ಮತಗಳನ್ನು ಪಡೆದಿದ್ದಾರೆ. 227 ಮತಗಳು ತಿರಸ್ಕೃತವಾಗಿವೆ. ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 1,270 ಮತಗಳನ್ನು ಪಡೆದಿದ್ದಾರೆ. ಒಟ್ಟು 6,999 ಮತಗಳ ಎಣಿಕೆ ಮುಕ್ತಾಯವಾಗಿದೆ.

ಪದವೀಧರರ ಕ್ಷೇತ್ರ ಫಲಿತಾಂಶ

ನೈರುತ್ಯ ಪದವೀಧರರ ಕ್ಷೇತ್ರ: ಬಿಜೆಪಿಯ ಸರ್ಜಿ ಮುನ್ನಡೆ

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿಯ ಧನಂಜಯ ಸರ್ಜಿ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ಧನಂಜಯ ಸರ್ಜಿ ಅವರು 6,714 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಆಯನೂರು ಮಂಜುನಾಥ್ 2,434 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 3,218 ಮತಗಳನ್ನು ತೆಗೆದುಕೊಂಡಿದ್ದಾರೆ.

ಮೊದಲ ಸುತ್ತಿನಲ್ಲಿ 14ಸಾವಿರ ಮತಗಳ ಎಣಿಕೆ ನಡೆದಿದ್ದು, 1,093 ಮತಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಜಿ ಸಿ ಪ್ರಕಾಶ್ ತಿಳಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರ: ಕಾಂಗ್ರೆಸ್‌ನ ರಾಮೋಜಿಗೌಡರಿಗೆ ಮುನ್ನಡೆ

ಬೆಂಗಳೂರು ಪದವೀಧರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್‌ನ ರಾಮೋಜಿ ಗೌಡ ಅವರು ಬಿಜೆಪಿ ಅಭ್ಯರ್ಥಿ ಅ. ದೇವೇಗೌಡರಿಗಿಂತ 760 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ: ಪ್ರಗತಿಯಲ್ಲಿ ಮತ ಎಣಿಕೆ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಗುಲಬರ್ಗಾ ವಿಶ್ವವಿದ್ಯಾಲಯದ ಸಾದ್ದಿ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಸಭಾಂಗಣದಲ್ಲಿ ನಡೆಯುತ್ತಿದೆ.

ಮತ ಎಣಿಕೆ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಸಂಜೆ 7ರವರೆಗೂ ಮೊದಲ ಸುತ್ತಿನ ಮತ ಎಣಿಕೆಯ ವಿವರ ಲಭ್ಯವಾಗಿಲ್ಲ. ಬೆಳಿಗ್ಗೆಯೇ ಮತ ಎಣಿಕೆ ಕೇಂದ್ರಕ್ಕೆ ಬಂದಿರುವ ಅಭ್ಯರ್ಥಿಗಳು ಮತ ಎಣಿಕೆ ಮುಗಿಯುವುದಕ್ಕೆ ಕಾಯುತ್ತಿದ್ದಾರೆ.

ಒಟ್ಟು 14 ಮತ ಎಣಿಕೆ ಟೇಬಲ್ ಗಳನ್ನು ವ್ಯವಸ್ಥೆ ಮಾಡಿದ್ದು, ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ, ಸಹಾಯಕ ಚುನಾವಣಾಧಿಕಾರಿಗಳಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಾ. ಚಂದ್ರಶೇಖರ್‌ ಪಾಟೀಲ್ ಮತ್ತು ಬಿಜೆಪಿಯಿಂದ ಅಮರನಾಥ್ ಪಾಟೀಲ್ ಸ್ಪರ್ಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments