Homeಕರ್ನಾಟಕಶಿಕ್ಷಕರು ಎಂದರೆ ಮಕ್ಕಳಲ್ಲಿ ಮೌಲ್ಯ ಬಿತ್ತುವ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್

ಶಿಕ್ಷಕರು ಎಂದರೆ ಮಕ್ಕಳಲ್ಲಿ ಮೌಲ್ಯ ಬಿತ್ತುವ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್

ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

“ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ. ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳ್ತಾ ಇರ್ತಾರೆ. ಇದು ಅಕ್ಷರಶಃ ನಿಜ” ಎಂದರು.

“ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ. ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳು ಮತ್ತು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್‌ಗೆ ಇತ್ತು” ಎಂದರು.

“ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳ್ತೇನೆ. ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು. ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು” ಎಂದು ಹೇಳಿದರು.

“ಸರ್ಕಾರಿ ಶಾಲೆಗಳ, ಸರ್ಕಸರಿ ಶಿಕ್ಷಕರ ವಿಚಾರದಲ್ಲಿ ಎರಡು ಮುಖ್ಯ ಸಂಗತಿಗಳನ್ನು ಮುಂದಿಟ್ಟು ಮಾತು ಮುಗಿಸುತ್ತೇನೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ‌ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿ ಆಗುತ್ತಿವೆ. ಆದರೆ, ಒಂದು ಸಮೀಕ್ಷೆಯ ಪ್ರಕಾರ ಸರ್ಕಾರಿಗಳಲ್ಲಿ ಇಂಥಾ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಮಕ್ಕಳಲ್ಲಿ ಲಿಂಗ ಸೂಕ್ಷ್ಮತೆ, ಸಹಬಾಳ್ವೆ, ಸಹಿಷ್ಣತೆಯನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಬಹಳ ಮುಂದಿದ್ದಾರೆ” ಎಂದರು.

“ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. “ನನ್ನ‌ ಶಾಲೆ ನನ್ನ ಜವಾಬ್ದಾರಿ” ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ವು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ. ಇದೀಗ ತಣ್ಣಗಿನ‌ ಚಳಚಳಿಯ ರೂಪ ಪಡೆದುಕೊಂಡಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments