ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, “ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಡಿ.ಕೆ. ಶಿವಕುಮಾರ್ ತಾನೇ ಅಭ್ಯರ್ಥಿ ಎಂದು ಹೇಳಿಲ್ಲ” ಎಂದರು.
“ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ” ಎಂದು ತಿಳಿಸಿದರು.