Homeಕರ್ನಾಟಕವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ಬಿ.ನಾಗೇಂದ್ರ ಜು.18ರವರೆಗೆ ಇಡಿ ಕಸ್ಟಡಿಗೆ

ವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ಬಿ.ನಾಗೇಂದ್ರ ಜು.18ರವರೆಗೆ ಇಡಿ ಕಸ್ಟಡಿಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಆರು ದಿನಗಳವರೆಗೆ ಕಸ್ಟಡಿಗೆ ಪಡೆದಿದೆ.

ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ಅಕ್ರಮ ಪ್ರಕರಣ ಸಂಬಂಧ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು.

ಶನಿವಾರ ನಸುಕಿನಲ್ಲಿ ಯಲಹಂಕದಲ್ಲಿರುವ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿತ್ತು. ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ನ್ಯಾ.ಸಂತೋಷ್​ ಗಜಾನನ ಭಟ್​ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಅವರನ್ನು ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶುಕ್ರವಾರ ಸಂಜೆಯ ವೇಳೆಗೆ ವಶಕ್ಕೆ ಪಡೆದು ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ವಿಚಾರಣೆ ಸಂಬಂಧ ಎಸ್​​ಐಟಿ ಮುಂದೆ ಹಾಜರಾಗಿದ್ದ ದದ್ದಲ್ ನಂತರ ಬೆಂಗಳೂರಿನ ನಿವಾಸಕ್ಕೆ ಬಂದೇ ಇಲ್ಲ. ಕುಟುಂಬಸ್ಥರ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಲಹಂಕದ ಕೋಗಿಲು ಬಳಿ ಇರುವ ಬಸನಗೌಡ ದದ್ದಲ್ ವಿಲ್ಲಾದಲ್ಲಿ ಸದ್ಯ ಇಬ್ಬರು ಮನೆ ಕೆಲಸದವರು ಮಾತ್ರ ಇದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments