Homeಕರ್ನಾಟಕವಾಲ್ಮೀಕಿ ನಿಗಮ ಹಗರಣ: ದೂರು ದಾಖಲಿಸಿಕೊಂಡ ಸಿಬಿಐ, ಸಚಿವ ನಾಗೇಂದ್ರಗೆ ನೋಟಿಸ್ ಜಾರಿ ಸಾಧ್ಯತೆ

ವಾಲ್ಮೀಕಿ ನಿಗಮ ಹಗರಣ: ದೂರು ದಾಖಲಿಸಿಕೊಂಡ ಸಿಬಿಐ, ಸಚಿವ ನಾಗೇಂದ್ರಗೆ ನೋಟಿಸ್ ಜಾರಿ ಸಾಧ್ಯತೆ

ಕ‌ರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಸಚಿವ ನಾಗೇಂದ್ರಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಸದ್ಯ ಎಸ್ಐಟಿಯಲ್ಲಿರುವ ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಹೆಚ್ಚಾಗಿದೆ. ಎಸ್ಐಟಿ ವರ್ಗಾವಣೆಗೆ ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಇದೇ ಪ್ರಕರಣದಲ್ಲಿ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ರಾಜ್ಯದ ಸಿಐಡಿಯ ಎಸ್‌ಐಟಿ ತಂಡ ಈಗಾಗಲೇ ಬಂಧಿಸಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಯೂನಿಯನ್ ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಯೂನಿಯನ್‌ ಬ್ಯಾಂಕ್‌ನಲ್ಲಿರುವ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ಈ ವಂಚನೆಯ ಜಾಡು ಬೆನ್ನತ್ತಿದಾಗ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ವಾಲ್ಮೀಕಿ ನಿಗಮದ 94.73 ಕೋಟಿ ರೂ. ಹಣವನ್ನು ದೋಚುವಲ್ಲಿ ಸತ್ಯನಾರಾಯಣ ಪ್ರಮುಖ ಆರೋಪಿಯಾಗಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments