Homeಕರ್ನಾಟಕಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ದ್ವಾರಕೀಶ್ ಮೃತಪಟ್ಟ ಬಗ್ಗೆ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದವರು ದ್ವಾರಕೀಶ್‌ ಸಾವನ್ನು ಖಚಿತಪಡಿಸಿದ್ದಾರೆ.

“ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ” ಎಂದು ದ್ವಾರಕೀಶ್ ಪುತ್ರ ಯೋಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದ್ವಾರಕೀಶ್ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು.

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾ ಆಗಿದ್ದರೆ, ‘ವೀರ ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments