Homeಕರ್ನಾಟಕಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ನಮ್ಮ ವಿರೋಧ: ಬಿ ವೈ ವಿಜಯೇಂದ್ರ

ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ನಮ್ಮ ವಿರೋಧ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಸರಕಾರವು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಲಾಗಿದೆ. ಅಗತ್ಯವಿದ್ದಲ್ಲಿ ಹೈಕೋರ್ಟಿನಲ್ಲಿ ಇದನ್ನು ಪ್ರಶ್ನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆ ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ” ಎಂದರು.

“ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿಯೇ ಇಲ್ಲ. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದೆ. ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

“ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿ ಅವರ ಸರಕಾರ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments