ವಿಧಾನಪರಿಷತ್ ಚುನಾವಣೆಯಲ್ಲಿ ಮೂರು ಮತಗಳು ಅಡ್ಡಮತದಾನವಾಗಿದೆ. ಒಂದು ಮತ ಅಸಿಂಧುವಾಗಿದೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿ ಕೊಳ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಲಿಂಗರಾಜ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರು ಜಯಶೀಲರಾಗಿದ್ದು ಖುಷಿ ತಂದಿದೆ. ಅಡ್ಡ ಮತದಾನ ಮಾಡಿದವರು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಪಕ್ಷದ ವೇದಿಕೆಯಲ್ಲಿ ಇದನ್ನು ಚರ್ಚೆ ಮಾಡುತ್ತೇವೆ ಎಂದರು.


