Homeಕರ್ನಾಟಕವಿಶ್ವ ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ

ವಿಶ್ವ ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ

ವಿಶ್ವದ ಶ್ರೇಷ್ಠ ಸರೋದ್ ವಾದಕರಲ್ಲಿ ಒಬ್ಬರೆನಿಸಿದ್ದ ಪಂಡಿತ್ ರಾಜೀವ್ ತಾರಾನಾಥ್ (92) ಅವರು ಮಂಗಳವಾರ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ರಾಜೀವ್‌ ತಾರಾನಾಥ್‌ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆ ಅವರ ಅನಾರೋಗ್ಯದ ಸುದ್ಧಿ ತಿಳಿದು ರಾಜ್ಯ ಸರಕಾರವೇ ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ತೀರ್ಮಾನಿಸಿತ್ತು. ಮೈಸೂರು ಉಸ್ತುವಾರಿ ಸಚಿವ ಡಾ. ಎಚ್‌ ಸಿ ಮಹದೇವಪ್ಪ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದಿದ್ದಾರೆ.

“ಖ್ಯಾತ ಸರೋದ್ ವಾದಕ, ಪಂಡಿತ್ ರಾಜೀವ್ ತಾರಾನಾಥ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಗೌರವದ ನಮನಗಳು.ತಮ್ಮ ಬದುಕಲ್ಲಿ ಬಹಳಷ್ಟು ಬಡ ಮಕ್ಕಳು ಹಾಗೂ ಶೋಷಿತ ವರ್ಗದ ಪ್ರತಿಭೆಗಳಿಗೆ ಉಚಿತವಾಗಿ ಸಂಗೀತ ಹೇಳಿಕೊಟ್ಟ ತಾರಾನಾಥರು ಮಹಾನ್ ಕಲಾವಿದರಾಗಿದ್ದರು .‌ ಇತ್ತೀಚೆಗಷ್ಟೇ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿ, ಸರ್ಕಾರದ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದೆ.ಇವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ದೊರೆಯಲಿ” ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸಂತಾಪ ಸೂಚಿಸಿ ಪೋಸ್ಟ್‌ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments